Friday, July 19, 2013

ಒಂದೆರಡು ಹನಿ ಕಣ್ಣೀರು....

ಒಂದೆರಡು ಹನಿ ಕಣ್ಣೀರು.......,
ಇವತ್ತು ನಾನು ಚನ್ನರಾಯಪಟ್ಟಣದಲ್ಲಿ ಶೂಟ್ ಗೆ ಹೋಗಿದ್ದೆ. ವಾರೆಂಟ್ ಕಾರ್ಯಕ್ರಮಕ್ಕಾಗಿ ಅರ್ಧ ಘಂಟೆ ವಿಶ್ಯುವಲ್ ನೀಡುವ ಜವಾಬ್ದಾರಿ ನನ್ನ ಮೇಲಿತ್ತು. ಪ್ರೀತಿಗಾಗಿ ಜೀವ ತೆತ್ತ ಹುಡುಗನ ಸುತ್ತ ಆ ಸ್ಟೋರಿ. ಅರ್ಥಾತ್ ಮೌನ ಮುರಿದು ಬಿದ್ದ ಮನೆಯಲ್ಲಿ ಕರುಳ ಕುಡಿಗಾಗಿ ಆಕ್ರಂಧನ....., ಆ ತಾಯಿ ಅವನಪ್ಪನ 2 ನೇ ಹೆಂಡತಿ. ಈತ ಆಕೆಗಿದ್ದ ಒಬ್ಬನೇ ಒಬ್ಬ ಮಗ. ತುಂಡು ಜಮೀನು..., ಎಷ್ಟೇ ಹಂಚಿದರೂ ಕರಗಲಾರದ ವಾತ್ಸಲ್ಯ. ಅವನು 24 ವರ್ಷದ ಯುವಕನಾಗಿದ್ರೂ ಆ ತಾಯಿಗೆ 4 ವರ್ಷದ ಬಾಲಕ.
ಇಂತಹ ಹುಡುಗ ಕೊಲೆಯಾದ.... ಆತನ ಶವ ನಾಲೆಯಲ್ಲಿ ತೇಲಿ ಹೋಗಿ ಮೀನು, ಹುಳ ಹುಪ್ಪಟೆಗಳಿಗೆ ಮೃಷ್ಟಾನ್ನವಾಯ್ತು.
ಪ್ರೀತಿಸಿದ್ದೇ ಆ ಹುಡುಗನಿಗೆ ಮುಳುವಾಯ್ತು. ತನ್ನ ಪ್ರೀತಿಯ ಹುಡುಗಿಗೆ 18 ವರ್ಷ ಆಗಲಿ ಅಂತ ಕಾಯುತ್ತಿದ್ದ. ದುರದೃಷ್ಟಾವಷಾತ್ ಅದಕ್ಕೂ ಮುನ್ನವೇ ಆಕೆಯ ಮದುವೆ ಆಯ್ತು. ನೆಚ್ಚಿದ ನಲ್ಲನನ್ನು ಬಿಟ್ಟಿರದ ಆ ಜೀವ ತನ್ನತನ ಉಳಿಸಿಕೊಂಡು ಆತನಿಗಾಗಿ ಕಾಯುತ್ತಿದ್ದಳು. ಮದುವೆಯಾಗಿ ಒಂದೂವರೆ ತಿಂಗಳು....., ತಾಳಿ ಕಟ್ಟಿದವನಿಗೆ ನಾನೊಲ್ಲೇ.. ಅನ್ನುತ್ತಲೇ ಬಂದಿದ್ದ ಆಕೆ ಆಷಾಡಕ್ಕೆ ಮನೆಗೆ ಬಂದಿದ್ದಳು.
ಹೀಗೆ ಪ್ರೀತಿಯ ಹುಡುಗನಿಗೆ ಪೋನ್ ಮಾಡಿದ ಹುಡುಗಿ ಅವತ್ತು ಆತನ ಜೊತೆ ಇಡೀ ದಿನ ಸುತ್ತಾಡಿದ್ದಾಳೆ. ಇವೆಲ್ಲವನ್ನೂ ಕಂಡ ಜನ ಅವಳ ಅಪ್ಪನಿಗೆ ವಿಷಯ ತಿಳಿಸಿ ಬಾಯಿಗೆ ಬಂದಂತೆ ಮಾತನಾಡಿದ್ದಾರೆ.
ಆ ಹುಡುಗ ಕೊಲೆಯಾದ....., ಹುಡುಗಿಯ ಸಂಬಂದಿಕರು ಆತನನ್ನ ಕೊಂದು ನಾಲೆಗೆ ಎಸೆದು ಬಿಟ್ಟರು.
ಈಗ ಅವನ ವಿಧವೆ ತಾಯಿ ಅಳುತ್ತಿದ್ದಾರೆ. ಆಕೆಯ ಕಣ್ಣೀರು ಒರೆಸೋಕು ಯಾರೂ ಇಲ್ಲ. ಕರಗುತ್ತಿರುವ ಆ ಮಾತೃ ಹೃದಯ.... ನೋವುಗಳ ಜೊತೆಗೆ................................ ಆಕೆ ಬದುಕುತ್ತಾಳೋ ಇಲ್ಲವೋ ಗೊತ್ತಿಲ್ಲ. ನನ್ನೆದೆಯಲ್ಲಿ ಅಸಾಧ್ಯ ವೇದನೆ....., ಯಾರೂ ಇಲ್ಲದ ಆ ತಾಯಿಗೆ ಅವುಕಿಕ್ಕೊಂಡ ಶೂನ್ಯತೆಗೆ... ಜೀವ ತುಂಬುವ,  ಮಗನ ನೆನಪಲ್ಲೇ ಕರಗಿ ಸಾಯುವ ಆ ಅಮ್ಮನಿಗೆ.... ನಾನಿದ್ದೇನೇ ಎನ್ನುವ ಹೃದಯ....?????


No comments: